ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
Cross references
ದಾವೀದನೂ ಇಸ್ರಾಯೇಲ್ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.
ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.
ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು.
ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.
ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ.
ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.