ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ.
Cross references
ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ
ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ.
ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.
ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ.
ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.
ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ.
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.