ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
Cross references
ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.
ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.