ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
Cross references
ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.
ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.
ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.