ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
Cross references
ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.
ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.
ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.