ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
Cross references
ಆಗ ದೇವರು ದವಡೆ ಟೊಳ್ಳಾದ ಒಂದು ಸ್ಥಳವನ್ನು ಸೀಳಿಬಿಟ್ಟಾಗ ಅದರೊಳಗಿಂದ ನೀರು ಹೊರಟುಬಂತು. ಸಂಸೋನನು ಆ ನೀರನ್ನು ಕುಡಿದ ದ್ದರಿಂದ ಅವನ ಆತ್ಮ ತಿರಿಗಿ ಬಂತು; ಅವನು ಜೀವಿಸಿ ದನು. ಆದದರಿಂದ ಏನ್ಹಕ್ಕೋರೇ ಎಂದು ಅದಕ್ಕೆ ಹೆಸರಿಟ್ಟನು. ಈ ದಿನದ ವರೆಗೂ ಲೆಹೀಯಲ್ಲಿ ಅದು ಇದೆ.ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ--
ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.
ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.
ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ.
ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ.
ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
ನನ್ನ ಇಕ್ಕಟ್ಟಿನ ದಿವಸದಲ್ಲಿ ನಿನ್ನನ್ನು ಕರೆಯುವೆನು; ನೀನು ನನಗೆ ಉತ್ತರ ಕೊಡುವಿ.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ
ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ
ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.