ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
Cross references
ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.
ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.
ನಾನು ನಿಮ್ಮನ್ನು ಕೋಲಿನ ಕೆಳಗೆ ಹಾದುಹೋಗುವಂತೆ ಮಾಡಿ ಒಡಂಬ ಡಿಕೆಯ ಬಂಧನದಲ್ಲಿ ನಿಮ್ಮನ್ನು ಸೇರಿಸುತ್ತೇನೆ.
ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ?
ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.
ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.