ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
Cross references
ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ
ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ ಮತ್ತು ನೀತಿಯನ್ನು ನೀತಿವಂತನಿಂದ ತೆಗೆದುಹಾಕುವವರಿಗೂ ಅಯ್ಯೋ!
ಇವು ಗಳ ನಿಮಿತ್ತ ನಾನು ಅವರನ್ನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.
ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.