ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
Cross references
ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.
ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ.
ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.
ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.
ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.
ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.