ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
Cross references
ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ.
ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ.
ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.
ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.
ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.
ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು.
ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ
ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.