ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
Cross references
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ.
ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು.
ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.
ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು.
ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.
ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.
ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.
ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,
ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು.
ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ;
ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.