ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
Cross references
ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.