ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
Cross references
ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.
ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.
ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.
ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.
ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
ಆದರೆ ಕರ್ತನ ಆತ್ಮನು ಸೌಲನನ್ನು ಬಿಟ್ಟು ಹೋದನು;
ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.
ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.
ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.