ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು.
Cross references
ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು.
ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
ನಿನ್ನ ಜನರು ನಿನ್ನಲ್ಲಿ ಸಂತೋಷ ಪಡುವ ಹಾಗೆ ನೀನು ತಿರುಗಿ ನಮ್ಮನ್ನು ಉಜ್ಜೀವಿ ಸುವದಿಲ್ಲವೋ?
ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ.
ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.