ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
Cross references
ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.
ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.
ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.
ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ?
ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.
ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.
ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.