ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
Cross references
ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.
ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.
ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.