ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
Cross references
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.
ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು.
ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು.
ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.