ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.
Cross references
ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು.
ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.
ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.
ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.