ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
Cross references
ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ
ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.
ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.
ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.