Home Bibles ಕೀರ್ತನೆಗಳು 58:1 · ಕನ್ನಡ ಬೈಬಲ್
ಕೀರ್ತನೆಗಳು 58:1 · ಕನ್ನಡ ಬೈಬಲ್

ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?

Cross references

ಅಂಕೆಗಳ ಪುಸ್ತಕ 11:16

ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.

ದ್ವಿತೀಯೋಪದೇಶಕಾಂಡ 1:15

ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ

ದ್ವಿತೀಯೋಪದೇಶಕಾಂಡ 16:18

ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.

2 ಸಮುವೇಲ 5:3

ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.

2 ಸಮುವೇಲ 23:3

ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.

2 ದಿನವೃತ್ತಾಂತ 19:6

ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.

ಕೀರ್ತನೆಗಳು 57:1

ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.

ಕೀರ್ತನೆಗಳು 59:1

ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು.

ಕೀರ್ತನೆಗಳು 72:1

ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.

ಕೀರ್ತನೆಗಳು 82:1

ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.

ಕೀರ್ತನೆಗಳು 82:6

ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.

ಯೆಶಾಯ 11:3

ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;

ಯೆಶಾಯ 32:1

ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.

ಯೆರೆಮಿಯ 23:5

ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.

ಮತ್ತಾಯ 26:3

ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು

ಮತ್ತಾಯ 27:1

ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

ಲೂಕ 23:50

ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.

ಅಪೋಸ್ತಲರ ಕೃತ್ಯಗಳು 5:21

ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್‌ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು

Interlinear

Choose Theme