ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
Cross references
ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು.
ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು.
ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು.
ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.
ನಿನ್ನ ಪಾದವೂ ನಿನ್ನ ಶತ್ರುಗಳ ರಕ್ತದಲ್ಲಿ ಕಲಕುವ ಹಾಗೆ ಮಾಡುವೆನು. ನಿನ್ನ ನಾಯಿಗಳ ನಾಲಿಗೆಯೂ ಸಹ ಹಾಗೆಯೇ ಮಾಡುವದು.
ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.