ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
Cross references
ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ.
ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ.
ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು.
ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.