Cross references
ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.
ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
ಅಡವಿ ಕತ್ತಿಯ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.
ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.