Home Bibles ಕೀರ್ತನೆಗಳು 59:15 · ಕನ್ನಡ ಬೈಬಲ್
ಕೀರ್ತನೆಗಳು 59:15 · ಕನ್ನಡ ಬೈಬಲ್

ಅವರು ಊಟಕ್ಕಾಗಿ ಅಲೆದಾಡಲಿ; ತೃಪ್ತಿ ಯಾಗದೆ ಗುಣಗುಟ್ಟಲಿ.

Cross references

ದ್ವಿತೀಯೋಪದೇಶಕಾಂಡ 28:48

ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.

ದ್ವಿತೀಯೋಪದೇಶಕಾಂಡ 28:53

ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.

2 ಅರಸುಗಳು 6:25

ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.

ಯೋಬ 15:23

ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.

ಯೋಬ 30:1

ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು

ಕೀರ್ತನೆಗಳು 109:10

ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.

ಯೆಶಾಯ 8:21

ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.

ಯೆಶಾಯ 56:11

ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.

ವಿಲಾಪಗಳು 4:4

ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.

ವಿಲಾಪಗಳು 4:9

ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.

ವಿಲಾಪಗಳು 5:9

ಅಡವಿ ಕತ್ತಿಯ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.

ಮೀಕ 3:5

ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.

ಮತ್ತಾಯ 24:7

ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.

Interlinear

Choose Theme