ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.
Cross references
ಸೌಲನು ದಾವೀದನನ್ನು ಕೊಂದುಹಾಕುವ ಹಾಗೆ ತನ್ನ ಮಗನಾದ ಯೋನಾತಾನನ ಸಂಗಡವೂ ತನ್ನ ಸಮಸ್ತ ಸೇವಕರ ಸಂಗಡವೂ ಮಾತನಾಡಿದನು.
ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?
ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ.
ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚುಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ;
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ