ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
Cross references
ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ
ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.
ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು.
ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.
ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.
ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.
ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್ ಎಂಬ ಹೆಸರಿಟ್ಟನು.
ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.
ಅರಾಮ್ಯರು ತಾವು ಇಸ್ರಾಯೇಲಿನ ಮುಂದೆ ಸೋತುಹೋದದ್ದನ್ನು ಕಂಡಾಗ ಅವರು ದೂತರನ್ನು ಕಳುಹಿಸಿ ನದಿಯ ಆಚೆಯಲ್ಲಿರುವ ಅರಾಮ್ಯ ರನ್ನು ಕರಕೊಂಡರು. ಹದರೆಜರನ ಸೈನ್ಯಾಧಿಪತಿ ಯಾದ ಶೋಫಕನು ಅವರ ಮೇಲೆ ಇದ್ದನು.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.
ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು.
ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು.
ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ?
ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
ನಮ್ಮ ರಕ್ಷಣೆಯ ಓ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು.
ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ;
ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ?
ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ;
ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.