ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ?
Cross references
ಆದರೆ ಕರ್ತನು ನನಗೆ--ಹೋಗಬೇಡಿರಿ; ಯುದ್ಧಮಾಡ ಬೇಡಿರಿ; ಯಾಕಂದರೆ ನಾನು ನಿಮ್ಮ ಮಧ್ಯದಲ್ಲಿ ಇರುವದಿಲ್ಲ; ನೀವು ನಿಮ್ಮ ಶತ್ರುಗಳಿಂದ ಹೊಡೆಯ ಲ್ಪಡುವಿರಿ ಎಂದು ಅವರಿಗೆ ಹೇಳು ಅಂದನು.
ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
ಅವರು ಆರ್ಭಟಿಸುವ ಶಬ್ದ ವನ್ನು ಫಿಲಿಷ್ಟಿಯರು ಕೇಳಿದಾಗ--ಇಬ್ರಿಯರ ಪಾಳೆ ಯದ ಈ ಮಹಾ ಆರ್ಭಟವೇನು ಎಂದು ಹೇಳಿ ಕರ್ತನ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳುಕೊಂಡರು.
ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
ಫಿಲಿಷ್ಟಿಯರು ಇಸ್ರಾಯೇಲಿನ ಸಂಗಡ ಯುದ್ಧವನ್ನು ಮಾಡಿದರು; ಇಸ್ರಾಯೇ ಲಿನ ಜನರು ಫಿಲಿಷ್ಟಿಯರ ಮುಂದೆ ಓಡಿಹೋಗಿ ಗಿಲ್ಬೋಯ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ?
ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.