ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
Cross references
ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.
ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಅವನು ಬುದ್ಧಿ ಯಿಂದ ಕಾರ್ಯವನ್ನು ನಡಿಸುತ್ತಿದ್ದನು. ಆದದರಿಂದ ಸೌಲನು ಅವನನ್ನು ಯುದ್ಧಸ್ಥರ ಮೇಲೆ ಅಧಿಕಾರಿಯಾಗ ಮಾಡಿದನು. ಅವನು ಸಮಸ್ತ ಜನರ ದೃಷ್ಟಿಯಲ್ಲಿಯೂ ಸೌಲನ ಎಲ್ಲಾ ಸೇವಕರ ದೃಷ್ಟಿಯಲ್ಲಿಯೂ ಒಪ್ಪಿಗೆಯಾಗಿದ್ದನು.
ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು.
ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು.
ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.
ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ.
ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.
ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ.
ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ.
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.