ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
Cross references
ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು.
ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.
ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?
ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.