ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ.
Cross references
ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು.
ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ.
ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ.
ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ.
ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
ಆದದರಿಂದ ಅವರು ಪ್ರಾತಃ ಕಾಲದ ಮೇಘದ ಹಾಗೆಯೂ ಬೇಗನೆ ಮಾಯ ವಾಗುವ ಇಬ್ಬನಿ ಹಾಗೆಯೂ ಸುಳಿಗಾಳಿಯು ನೆಲದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ ಚಿಮಿಣಿಗೆಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.
ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.