Home Bibles ಕೀರ್ತನೆಗಳು 7:15 · ಕನ್ನಡ ಬೈಬಲ್
ಕೀರ್ತನೆಗಳು 7:15 · ಕನ್ನಡ ಬೈಬಲ್

ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.

Cross references

ಎಸ್ತೇರ್ 7:10

ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

ಯೋಬ 4:8

ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.

ಯೋಬ 6:27

ಹೌದು, ದಿಕ್ಕಿಲ್ಲದವನ ಮೇಲೆ ಬಲೆ ಹಾಕುತ್ತೀರಿ; ನಿಮ್ಮ ಸ್ನೇಹಿತನಿ ಗೋಸ್ಕರ ಕುಣಿಯನ್ನು ಅಗೆಯುತ್ತೀರಿ.

ಯೋಬ 15:35

ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.

ಕೀರ್ತನೆಗಳು 9:15

ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.

ಕೀರ್ತನೆಗಳು 10:2

ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.

ಕೀರ್ತನೆಗಳು 35:7

ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.

ಕೀರ್ತನೆಗಳು 57:6

ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.

ಕೀರ್ತನೆಗಳು 94:13

ದುಷ್ಟನಿಗಾಗಿ ಕುಣಿಯು ಅಗಿಯಲ್ಪಡುವ ವರೆಗೆ ಕಷ್ಟದ ದಿವಸಗಳಲ್ಲಿ ಅಂಥವನಿಗೆ ವಿಶ್ರಾಂತಿ ಯನ್ನು ಕೊಡುವನು.

ಕೀರ್ತನೆಗಳು 119:85

ನಿನ್ನ ನ್ಯಾಯ ಪ್ರಮಾಣದ ಪ್ರಕಾರವಾಗಿರದ ಅಹಂಕಾರಿಗಳು ನನಗೆ ಕುಣಿಗಳನ್ನು ಅಗೆದಿದ್ದಾರೆ.

ಕೀರ್ತನೆಗಳು 140:9

ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.

ಕೀರ್ತನೆಗಳು 141:10

ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.

ಸಾಮೇತಿಗಳು 5:22

ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.

ಸಾಮೇತಿಗಳು 26:27

ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.

ಸಭಾಪ್ರಸಂಗಿ 10:8

ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.

ಯೆಶಾಯ 33:11

ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು.

ಯೆಶಾಯ 59:4

ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.

ದಾನಿಯೇಲ 6:25

ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.

Interlinear

Choose Theme