ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
Cross references
ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.
ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.
ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು.
ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.