Home Bibles ಕೀರ್ತನೆಗಳು 71:11 · ಕನ್ನಡ ಬೈಬಲ್
ಕೀರ್ತನೆಗಳು 71:11 · ಕನ್ನಡ ಬೈಬಲ್

ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.

Cross references

1 ಸಮುವೇಲ 23:7

ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.

2 ದಿನವೃತ್ತಾಂತ 32:13

ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?

ಕೀರ್ತನೆಗಳು 3:2

ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.

ಕೀರ್ತನೆಗಳು 7:2

ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.

ಕೀರ್ತನೆಗಳು 37:25

ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.

ಕೀರ್ತನೆಗಳು 37:28

ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.

ಕೀರ್ತನೆಗಳು 41:7

ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ;

ಕೀರ್ತನೆಗಳು 42:10

ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.

ಕೀರ್ತನೆಗಳು 50:22

ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.

ದಾನಿಯೇಲ 3:15

ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.

ಮತ್ತಾಯ 27:42

ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;

ಮತ್ತಾಯ 27:46

ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.

ಮತ್ತಾಯ 27:49

ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.

Interlinear

Choose Theme