ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.
Cross references
ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ;
ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;
ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.