ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
Cross references
ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.
ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.
ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;