ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
Cross references
ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ?
ಲೆಕ್ಕವಿಲ್ಲದ ಪರಾಕ್ರಮಿಗಳನ್ನು ಚೂರು ಚೂರು ಮಾಡಿ, ಮತ್ತೊಬ್ಬರನ್ನು ಅವರ ಸ್ಥಳದಲ್ಲಿ ನಿಲ್ಲಿಸು ತ್ತಾನೆ.
ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
ಓ ಕರ್ತನೇ, ನಿನ್ನ ಜನರನ್ನು ತುಂಡುತುಂಡು ಮಾಡುತ್ತಾರೆ; ನಿನ್ನ ಸ್ವಾಸ್ಥ್ಯವನ್ನು ಬಾಧಿಸುತ್ತಾರೆ.
ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.