ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
Cross references
ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ.
ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ.
ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.
ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು.
ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.
ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು.
ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.