ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
Cross references
ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.
ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;