ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
Cross references
ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.
ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?
ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ.
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.
ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.