Home Bibles ಕೀರ್ತನೆಗಳು 76:7 · ಕನ್ನಡ ಬೈಬಲ್
ಕೀರ್ತನೆಗಳು 76:7 · ಕನ್ನಡ ಬೈಬಲ್

ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?

Cross references

ನಿರ್ಗಮಕಾಂಡ 15:1

ಆಗ ಮೋಶೆಯೂ ಇಸ್ರಾಯೇಲ್‌ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.

ನಿರ್ಗಮಕಾಂಡ 15:4

ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.

1 ದಿನವೃತ್ತಾಂತ 16:25

ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;

ಎಜ್ರಾ 9:15

ಇಸ್ರಾಯೇಲ್‌ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.

ಕೀರ್ತನೆಗಳು 2:12

ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.

ಕೀರ್ತನೆಗಳು 89:7

ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.

ಕೀರ್ತನೆಗಳು 90:11

ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.

ಕೀರ್ತನೆಗಳು 130:3

ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?

ಯೆರೆಮಿಯ 10:7

ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,

ನಹೂಮ 1:6

ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.

ಮತ್ತಾಯ 10:28

ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.

1 ಕೊರಿಂಥದವರಿಗೆ 10:22

ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?

ಪ್ರಕಟನೆ 6:16

ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.

ಪ್ರಕಟನೆ 14:7

ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.

ಪ್ರಕಟನೆ 15:4

ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.

Interlinear

Choose Theme