ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
Cross references
ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.
ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;
ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.