ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು.
Cross references
ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು.
ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು
ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.