ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು.
Cross references
ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.
ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.
ಆಗ ಜನರು ತಮ್ಮ ಕುಟುಂಬಗಳ ಪ್ರಕಾರವಾಗಿ ಪ್ರತಿಯೊಬ್ಬನು ತನ್ನ ಗುಡಾರದ ಬಾಗಲಿನಲ್ಲಿ ಅಳುವ ದನ್ನು ಮೋಶೆ ಕೇಳಿದನು; ಆದಕಾರಣ ಕರ್ತನ ಕೋಪವು ಬಹಳವಾಗಿ ಉರಿಯಿತು; ಮೋಶೆಗೂ ಅದು ಮೆಚ್ಚಿಗೆಯಾಗಲಿಲ್ಲ.
ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.
ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.