ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
Cross references
ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.
ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?
ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.
ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?
ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;
ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.