ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
Cross references
ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.
ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
ಯಾರಿಗೆ ನೀನು ಬಲವಾಗಿ ದ್ದೀಯೋ ಆ ಮನುಷ್ಯನು ಭಾಗ್ಯವಂತನು; ಯಾರಲ್ಲಿ ಆತನ ಮಾರ್ಗಗಳು ಇವೆಯೋ ಅವನೇ ಧನ್ಯನು.
ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
ಕೋಟೆಯ ಮೇಲೆ ಸೂರೆಮಾಡುವ ಹಾಗೆ ಸೂರೆಯನ್ನು ಬಲಿಷ್ಠರ ಮೇಲೆ ತಟ್ಟನೆ ತಂದೊಡ್ಡು ವಾತನು ಆತನೇ.
ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.