Home Bibles ಕೀರ್ತನೆಗಳು 80:15 · ಕನ್ನಡ ಬೈಬಲ್
ಕೀರ್ತನೆಗಳು 80:15 · ಕನ್ನಡ ಬೈಬಲ್

ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.

Cross references

ದ್ವಿತೀಯೋಪದೇಶಕಾಂಡ 26:15

ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.

ಕೀರ್ತನೆಗಳು 80:8

ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.

ಕೀರ್ತನೆಗಳು 89:21

ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.

ಕೀರ್ತನೆಗಳು 90:13

ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.

ಯೆಶಾಯ 5:1

ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.

ಯೆಶಾಯ 11:1

ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.

ಯೆಶಾಯ 49:5

ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.

ಯೆಶಾಯ 63:15

ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?

ಯೆರೆಮಿಯ 2:21

ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?

ಯೆರೆಮಿಯ 23:5

ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.

ವಿಲಾಪಗಳು 3:50

ವಿಶ್ರಮಿಸಿಕೊಳ್ಳುವದೂ ಇಲ್ಲ.

ಯೆಹೆಜ್ಕೇಲ 17:22

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.

ಜೆಕರ್ಯ 3:8

ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.

ಜೆಕರ್ಯ 6:12

ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.

ಮಾರ್ಕ 12:1

ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.

ಯೋಹಾನ 15:1

ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.

Interlinear

Choose Theme