ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.
Cross references
ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.
ಓ ಕರ್ತನೇ, ನಿನಗೆ ಮೊರೆಯಿಟ್ಟಿದ್ದೇನೆ; ನಾನು ಆಶಾಭಂಗಪಡ ದಂತೆ ಮಾಡು; ದುಷ್ಟರು ಆಶಾಭಂಗಪಡಲಿ; ಅವರು ಸಮಾಧಿಯಲ್ಲಿ ಮೌನವಾಗಿರಲಿ.
ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ;
ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ.
ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷೇ ಗಿಡವಾಯಿತು; ಅದರ ಬಳ್ಳಿಗಳು ಅದರ ಕಡೆಗೆ ತಿರುಗಿ ಕೊಂಡವು, ಅದರ ಬೇರುಗಳು ಅದರ ಕೆಳಗಿದ್ದವು; ಹೀಗೆ ಅದು ದ್ರಾಕ್ಷೇ ಗಿಡವಾಯಿತು, ಕೊಂಬೆಗಳು ಒಡೆದು ಬಳ್ಳಿಗಳು ಹಬ್ಬಿದವು.
ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ; ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ.
ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.