ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
Cross references
ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.
ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.