ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
Cross references
ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.
ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು.
ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.