ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
Cross references
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.
ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.
ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
ನಮ್ಮ ಗುರಾಣಿಯಾಗಿರುವ ಓ ದೇವರೇ, ನೋಡು; ನಿನ್ನ ಅಭಿಷಿಕ್ತನ ಮುಖವನ್ನು ದೃಷ್ಟಿಸು.
ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.
ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯದಲ್ಲಿಯೇ ನಿರೀಕ್ಷೆ ಯಿಟ್ಟಿದ್ದೇನೆ.
ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.